ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ನಡೆದ ಕೆ.ಆರ್.ಐ.ಡಿ.ಎಲ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ-18: ಜಿಪಂ ಸಿಇಒ ರಾಹುಲ್ ಶಿಂಧೆ ರವರು ಶುಕ್ರವಾರದಂದು ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಕರ್ನಾಟಕ ರೂರಲ್ ಇನ್ ಫ್ರಾಸ್ಟ್ರಕ್ಷರ್ ಡೆವಲಪ್ ಮೆಂಟ್ ಲಿಮಿಟೆಡ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದರು.
ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರಿಯ ಕಾಮಗಾರಿಗಳು ಹಾಗೂ ಸ್ಥಳೀಯ ಕಾಮಗಾರಿಗಳು ಒಟ್ಟು 1347 ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದ್ದು ಇದರಲ್ಲಿ ಪೂರ್ಣಗೊಂಡ ಕಾಮಗಾರಿಗಳು 760 ಹಾಗೂ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸುವಂತೆ ಸಭೆಯಲ್ಲಿನ ಎಲ್ಲ ಅಧಿಕಾರಿಗಳಿಗೆ ಮಾನ್ಯರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅದೇ ರೀತಿ ವಿವಿಧ ಕಾಮಗಾರಿಗಳಿಗೆ ಅನುದಾನದ ಅವಶ್ಯಕತೆ ಇದ್ದಲ್ಲಿ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲು ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದವರಿಗೆ ಸೂಚಿಸಿದರು.
ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದವರು ಎಲ್ಲ ಇಲಾಖೆಗಳ ಅನುಷ್ಟಾನಗೊಳಿಸುತ್ತಿರುವ ಕಾಮಗಾರಿಗಳ ಮೇಲುಸ್ತುವಾರಿ ವಹಿಸಿ ಗುಣಮಟ್ಟದ ಪ್ರಗತಿಯನ್ನು ಸಾಧಿಸುವುದು ಹಾಗೂ ಪ್ರತಿ ತಿಂಗಳು ಪ್ರಗತಿಯ ವರದಿಯನ್ನು ಜಿಲ್ಲಾ ಪಂಚಾಯತಗೆ ಸಲ್ಲಿಸುವುದು. ಕಾಮಗಾರಿಗಳನ್ನು ಪ್ರಾರಂಭಿಸಲು ಸ್ಥಳದ ಸಮಸ್ಯೆ ಇರುವಂತಹ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಶಾಸಕರ ಗಮನಕ್ಕೆ ತಂದು ಅವರುಗಳ ಸಹಕಾರದಿಂದ ಸ್ಥಳದ ಸಮಸ್ಯೆ ನಿವಾರಿಸಿ ಬೇಗನೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಸಭೆಗೆ ತಿಳಿಸಿದರು.
ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಬೆಳಗಾವಿ ಶಶಿಕಾಂತ ಬ. ಶೆಗುಣಸಿ ರವರು ಮಾತನಾಡಿ ಗ್ರಾಮ ವಿಕಾಸ ಯೋಜನೆ ಹಾಗೂ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆಯ ಕಾಮಗಾರಿಗಳು ಪ್ರಗತಿ ಹಂತದಲ್ಲಿ ಇರುತ್ತವೆ ಅಂತಾ ಸಭೆಗೆ ತಿಳಿಸಿದರು.n
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಮಾತನಾಡಿ ಸ್ಥಳೀಯ ಮಟ್ಟದಲ್ಲಿ ಬಾಕಿ ಇರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆಯ್ದ ಗ್ರಾಮ ಪಂಚಾಯತಿಗಳಿಂದ ಅನುದಾನವನ್ನು ತರಿಸಿಕೊಂಡು ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ರವರಿಗೆ ಸೂಚಿಸಿ ಹಾಗೂ ಅನುದಾನದ ಕೊರತೆ ಇರುವ ಸಂದರ್ಭದಲ್ಲಿ ತಮ್ಮ ಗಮನಕ್ಕೆ ತರಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿಗಳು(ಅಭಿವೃದ್ಧಿ) ಬಸವರಾಜ್ ಅಡವಿಮಠ, ಕಾರ್ಯನಿರ್ವಾಹಕikb ಅಭಿಯಂತರರು ಕೆ.ಆರ್.ಐ.ಡಿ.ಎಲ್ ಬೆಳಗಾವಿ ವಿಭಾಗ ಶಶಿಕಾಂತ ಬ. ಶೆಗುಣಸಿ, ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಚಿಕ್ಕೋಡಿ ವಿಭಾಗ ರೇಣು ಜ್ಯೋತಿ ಪಿ. ನಾರಾಯಣಕರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಕಿತ್ತೂರ ಕೆ.ರಾಮಣ್ಣ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಸವದತ್ತಿ ಹೆಚ್.ಎ ಕದ್ರಾಪೂರಕರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಅಥಣಿ ಶಂಕರ ಚವ್ಹಾಣ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
