11/12/2025
IMG-20240127-WA0046

ಬೆಳಗಾವಿ-27: ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ ೭೫ ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ ಎಂದರೆ ತಪ್ಪಾಗಲಾರದು. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ ಎಂದುಲೋಕೋಪಯೊಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ  ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಸಂದೇಶ ನೀಡಿದರು.ಸಂವಿಧಾನ ಜಾರಿಗೆ ಬಂದ ಈ ಅಮೃತಗಳಿಗೆಯಲ್ಲಿ ನಮ್ಮ ಭಾರತ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗಣರಾಜ್ಯೋತ್ಸವ ದಿನವಾದ ಇಂದಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‚ಸಂವಿಧಾನ ಜಾಗೃತಿ ಜಾಥಾ‛ವನ್ನು ಸರಕಾರ ಹಮ್ಮಿಕೊಂಡಿದೆ.ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ.ಸಂವಿಧಾನ ದಿನಾಚರಣೆಯ ಪ್ರಯುಕ್ತ ‚ಸಂವಿಧಾನ ಜಾಗೃತಿ ಜಾಥಾ‛ ರಾಷ್ಟ್ರೀಯ ಮಟ್ಟದ ಸಮಾವೇಶ ೨೫ನೇ ಫೆಬ್ರುವರಿ ೨೦೨೪ ರಂದು ಬೆಂಗಳೂರಿನಲ್ಲಿ ನಡೆಯಲಿದೆ.ಗಣರಾಜ್ಯೋತ್ಸವದ ಹೊಸ್ತಿಲಿನಲ್ಲಿ ಜನವರಿ ೧೮, ೨೦೨೪ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಇಡೀ ಜಗತ್ತಿಗೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕು ನೀಡಿದ ವಚನ ಚಳವಳಿಯ ನಾಯಕ ಬಸವಣ್ಣನವರನ್ನು ನಮ್ಮ ಸರ್ಕಾರವು ‚ಕರ್ನಾಟಕದ ಸಾಂಸ್ಕೃತಿಕ ನಾಯಕ‛ ಎಂದು ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.ನಾಗರೀಕ ಪೊಲೀಸ್ ಪಡೆ, ಕೆ.ಎಸ್.ಆರ್.ಪಿ ಪುರುಷ ಮತ್ತು ಮಹಿಳಾ ತುಕಡಿ, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಎನ್.ಸಿ.ಸಿ, ಭಾರತ ಸೇವಾದಳ ಮಹೇಶ್ವರಿ ಅಂದ ಮಕ್ಕಳ ಶಾಲೆ ಸೇರಿದಂತೆ ವಿವಿಧ ಶಾಲಾ ಮಕ್ಕಳು ಪರೇಡನಲ್ಲಿ ಭಾಗವಹಿಸಿದ್ದವು.ಸಂಸದೆ ಮಂಗಳಾ ಅಂಗಡಿ, ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ, ಕುಡಚಿ ಶಾಸಕ ಮಹೇಶ್ ತಮ್ಮಣ್ಣವರ, ಪ್ರಾದೇಶಿಕ ಆಯಕ್ತ ಸಂಜಯ ಶೆಟ್ಟೇಣ್ಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೋಲಿಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿ.ಪಂ ಸಿಇಓ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾಪೌರರು ಶೋಭಾ ಸೋಮನಾಚೆ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.**

error: Content is protected !!