filter: 0; fileterIntensity: 0.0; filterMask: 0; captureOrientation: null; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
ಬೆಳಗಾವಿ-04: ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್ 06 ರ ಶನಿವಾರ ಆಯೋಜಿಸಲಾಗಿದೆ ಎಂದು ಜೆಸಿಇಆರ್ನ ಪ್ರಾಚಾರ್ಯ ಮತ್ತು ನಿರ್ದೇಶಕರಾದ ಡಾ. ಎಸ್.ವ್ಹಿ. ಗೋರಬಾಳ ಅವರು ಹೇಳಿದರು.
ನಗರದ ಕಾಲೇಜು ಆವರಣದಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜೂನ್ 06 ರಂದು ಬೆಳಗ್ಗೆ 10:00 ಗಂಟೆಗೆ ಈ ಪ್ರತಿಷ್ಠಿತ ಕಾರ್ಯಕ್ರಮವು ಆರಂಭವಾಗಲಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆದ ಡಾ. ಪ್ರಸಾದ್ ರಾಂಪುರೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವಾಹಿನಿಯ ಮುಖ್ಯ ಸಂಪಾದಕರಾದ ಅಜಿತ್ ಹನಮಕ್ಕನವರ್ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಈ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳು ಈಗಾಗಲೇ ಎನ್ಬಿಎ ಮಾನ್ಯತೆ ಪಡೆದುಕೊಂಡಿವೆ. ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದ ಒಟ್ಟು 260 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.
ಶನಿವಾರ ನಡೆಯಲಿರುವ ಈ ಘಟೀಕೋತ್ಸವ ಹಾಗೂ ಪದವಿ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಾಂಶುಪಾಲರು ಕರೆ ನೀಡಿದರು.
ಈ ಸುದ್ದಿಗೋಷ್ಠಿಯಲ್ಲಿ ಡಾ. ಪ್ರಕಾಶ ಸೋನವಾಲಕರ್, ನಿವೃತ್ತ ಕರ್ನಲ್ ಜಾನಿ ಹಾಗೂ ಡಾ. ಜ್ಯೋತಿ ಬಿ.ಆರ್ ಹಾಜರಿದ್ದರು.
