09/06/2026
IMG-20260609-WA0006

ಬೆಳಗಾವಿ-09: ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಬೆಳಗಾವಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪತ್ರಿಕಾ ರಂಗದಲ್ಲಿ ತಮ್ಮ ಛಾಯಾಚಿತ್ರಗಳ ಮೂಲಕ ಜನಸಾಮಾನ್ಯರ ಸಮಸ್ಯೆಗಳು, ಸಾಮಾಜಿಕ ಘಟನೆಗಳು, ರಾಜಕೀಯ ಬೆಳವಣಿಗೆಗಳು ಹಾಗೂ ವಿವಿಧ ಕ್ಷೇತ್ರಗಳ ಕ್ಷಣಗಳನ್ನು ಪರಿಣಾಮಕಾರಿಯಾಗಿ ದಾಖಲಿಸಿರುವ ಪಿ.ಕೆ. ಬಡಿಗೇರ ಅವರ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!