12/12/2025
IMG-20240618-WA0017_copy_578x260

ಹುಬ್ಬಳ್ಳಿ-೧೯:ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟಂತಹ ವಿಷಯಗಳ ಕುರಿತು  ಮಂಗಳವಾರ ದಿನಾಂಕ 18.06.2024 ರಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಛೇರಿಯಲ್ಲಿ ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ರೈಲ್ವೆ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.
ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಒಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ಇರುವ ತೊಡಕುಗಳು ಹಾಗೂ ಅದರ ನಿವಾರಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಹಾಗೂ ಆದಷ್ಟು ಬೇಗ ಒಂದೇ ಭಾರತ ರೈಲು ಪ್ರಾರಂಭಿಸಲು ಸಂಸದರು ಒತ್ತಾಯಿಸಿದರು.
ಧಾರವಾಡ ವ್ಹಾಯಾ ಕಿತ್ತೂರ ಮಾರ್ಗವಾಗಿ ಬೆಳಗಾವಿ ವರೆಗಿನ ನೂತನ ರೈಲು ಮಾರ್ಗದ ನಿರ್ಮಾಣ ಕಾಮಗಾರಿಯು ನಿಧಾನಗತಿಯಲ್ಲಿ ನಡೆದಿದ್ದು, ತ್ವರಿತ ಗತಿಯಲ್ಲಿ ಕೈಗೊಳ್ಳಲು ನಿರ್ದೇಶಿಸಲಾಯಿತು.
ಬೆಳಗಾವಿ ಮಿರಾಜ ನಡುವೆ ಈ ಹಿಂದೆ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಪುನ: ಪ್ರಾರಂಭಿಸುವುದಕ್ಕೆ ಅಗತ್ಯಕ್ಕೆ ಕ್ರಮ ಕೈಗೊಳ್ಳುವುದು, ಪಂಡರಪುರ ಹಾಗೂ ರಾಜಸ್ಥಾನ ಕಡೆಗೆ ತೆರಳುವ ರೈಲುಗಳನ್ನು ಖಾನಾಪುರ, ಘಟಪ್ರಭಾ, ರಾಯಬಾಗ ನಿಲ್ದಾಣಗಳಲ್ಲಿ ನಿಲುಗಡೆಗೆ ಕ್ರಮ ಕೈಕೊಳ್ಳಲು ನಿರ್ದೇಶಿಸಲಾಯಿತು.
ಬೆಳಗಾವಿ ಜಿಲ್ಲೆಯು ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದ್ದು ಎಲ್ಲ ಸಾರ್ವಜನಿಕರ ಅನುಕೂಲಕ್ಕಾಗಿ ಮುಂಬೈ, ದೆಹಲಿ. ತಿರುಪತಿ, ಮಂಗಳೂರು, ಹೈದ್ರಾಬಾದ, ಬೀದರ ಹಾಗೂ ಸೊಲ್ಲಾಪುರ ನಗರಗಳನ್ನು ಸಂಪರ್ಕಿಸುವ ನೂತನ ರೈಲುಗಳನ್ನು ಪ್ರಾರಂಭಿಸುದಕ್ಕಾಗಿ ಚರ್ಚಿಸಲಾಯಿತು.
ಬೆಳಗಾವಿ ರೈಲು ನಿಲ್ದಾಣದ ಪಶ್ಚಿಮದ ಬಾಜು FOB ನಿರ್ಮಾಣ ಮಾಡುವುದು, ಪ್ಲಾಟ್ಫಾರ್ಮ್ ನಂಬರ್ 4ರಲ್ಲಿ ಎಕ್ಷ್ಕೆಲೇಟರ್ ಅಳವಡಿಸುವುದು, ದೇಸೂರಿನಲ್ಲಿ ಇನ್ನೊಂದು ಫಿಟ್ ಲೈನ್ ಪ್ರಾರಂಭಿಸುವುದು. ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಿಭಾಗಿಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಅರವಿಂದ್ ಶ್ರೀವಾಸ್ತವ್, ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಮಂಜುನಾಥ ಕನಮಡಿ, ಪ್ರಧಾನ ವ್ಯವಸ್ಥಾಪಕರ ಆಪ್ತ ಕಾರ್ಯದರ್ಶಿ ಶ್ರೀ ಸುನೀಲ ಹಾಗೂ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

error: Content is protected !!